
ಬೆಂಗಳೂರು (14.01.2021): ಮೀಸಲಾತಿ ಸಂಬಂಧ ಪಂಚಮಸಾಲಿ ಸಮುದಾಯದ ಪಾದಯಾತ್ರೆಯನ್ನು ಬಸವಶ್ರೀ ಜಯಮೃತ್ಯುಂಜಯ ಸ್ವಾಮೀಜಿ ಅವರು ಕೈಬಿಡಬೇಕೆಂದು ಸಂಭಾವ್ಯ ಸಚಿವ ಮುರುಗೇಶ್ ನಿರಾಣಿ ಮನವಿ ಮಾಡಿದ್ದಾರೆ.
ಪಂಚಮಸಾಲಿ ಸಮುದಾಯದ ಸಮಸ್ಯೆಗಳನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಆಲಿಸಿರುವುದರಿಂದ ಪಾದಯಾತ್ರೆ ಕೈಬಿಡುವಂತೆ ಶ್ರೀಗಳಿಗೆ ಮನವಿ ಮಾಡಿದ್ದಾರೆ.
ಸಚಿವರಾಗಿ ಸೇವೆ ಸಲ್ಲಿಸಲು ಮುಖ್ಯಮಂತ್ರಿಯವರು ತಮ್ಮ ಸಂಪುಟದಲ್ಲಿ ಅವಕಾಶ ಮಾಡಿಕೊಟ್ಟಿರುವುದಕ್ಕೆ ಧನ್ಯವಾದ ಸಲ್ಲಿಸುತ್ತೇನೆ. ಯಾವುದೇ ಖಾತೆ ಕೊಟ್ಟರೂ ಸಮರ್ಥವಾಗಿ ನಿಭಾಯಿಸುವೆ. ಈ ಹಿಂದೆ ಸಚಿವರಾಗಿ ಕೆಲಸ ಮಾಡಿರುವ ಅನುಭವವಿದ್ದು, ನಾಡಿನ ಜನರ ಸೇವೆಗೆ ಸದಾ ಸಿದ್ಧ ಎಂದಿದ್ದಾರೆ.